spot_img
spot_img
spot_img
spot_img
spot_img
spot_img

ಯುವತಿ ಜೊತೆ ಖುಲಂಖುಲ್ಲಾ ವಿಡಿಯೋ ಕಾಲ್..! 21 ಲಕ್ಷ ಕಳೆದುಕೊಂಡ ಪ್ರೋಫೆಸರ್…!

Published on

ಕ್ರೈಂ ಬ್ಯೂರೋ ವಿವೇಕವಾರ್ತೆ -ವಾಟ್ಸ್ಯಾಪ್‌ನಲ್ಲಿ ಪರಿಚಯವಾದ ಯುವತಿ ಜೊತೆ ವಿಡಿಯೋ ಕಾಲ್‌ನಲ್ಲಿ ಮಜಾ ತೆಗೆದುಕೊಂಡ ಪ್ರೊಫೆಸರ್‌ ಒಬ್ಬರು ಈಗ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ದೂರು ನೀಡುವಂತಾಗಿದೆ.

WhatsApp Group Join Now
Telegram Group Join Now

ಧಾರವಾಡದ ಸತ್ತೂರಿನ ನಯನಾಭಿರಾಮ ಉಡುಪ ಎನ್ನುವ ಪ್ರೊಫೆಸರ್ ಹೀಗೆ ಹಣ ಕಳೆದುಕೊಂಡವರು.

ವಾಟ್ಸ್ಯಾಪ್‌ನಲ್ಲಿ ಪರಿಚಯವಾದ ಅಂಜಲಿ ಶರ್ಮಾ ಎಂಬ ಯುವತಿ ಜೊತೆ ಚಾಟ್‌ ಮಾಡುತ್ತಿದ್ದ ಇವರಿಗೆ ಯುವತಿ ವಿಡಿಯೋ ಕಾಲ್ ಮಾಡಿದ್ದು, ಈ ಸಂದರ್ಭದಲ್ಲಿ ಖಾಸಗಿ ಅಂಗಾಂಗ ತೋರಿಸುವಂತೆ ಪ್ರಚೋದಿಸಿದ್ದಾಳೆ. ಪ್ರೊಫೆಸರ್ ʼಮುಕ್ತ ಮುಕ್ತʼವಾಗುತ್ತಿದ್ದಂತೆ ಅದನ್ನು ಯುವತಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾಳೆ. ವಿಡಿಯೋವನ್ನು ಪ್ರೊಫೆಸರ್‌ಗೆ ಕಳುಹಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ.

ನಂತರ ಯುವತಿ 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಳು. ಅದಾದ ಮೇಲೆ ಕೆಲ ದಿನಗಳ ಬಳಿಕ ವಿಕ್ರಮ್ ಎನ್ನುವ ಅಪರಿಚಿತ ವ್ಯಕ್ತಿ ನಾನು ಸೈಬರ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಕರೆ ಮಾಡಿದ್ದಾನೆ. ʼಅಂಜಲಿ ನನಗೆ ಗೊತ್ತು, 5 ಲಕ್ಷ ಹಣ ಕೊಡಿ, ಎಲ್ಲವೂ ಬಗೆಹರಿಯುತ್ತದೆʼ ಎಂದು ಒತ್ತಡ ಹಾಕಿದ್ದಾನೆ. ಬೆದರಿದ ಪ್ರೊಫೆಸರ್‌ ಹಂತ ಹಂತವಾಗಿ ಸೈಬರ್ ವಂಚಕರಿಗೆ 21 ಲಕ್ಷ ರೂ. ಹಣವನ್ನು ಟ್ರಾನ್ಸ್‌ಫರ್‌ ಮಾಡಿದ್ದಾರೆ. ಸದ್ಯ ನಿತ್ಯವೂ ಹಣಕ್ಕೆ ಬೇಡಿಕೆ ಇಡುತ್ತಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!