spot_img
spot_img
spot_img
spot_img
spot_img
spot_img

50,000 ರೂ ಸಾಲ ತೀರಿಸದ ಆಟೋ ಚಾಲಕನ ಹೆಂಡತಿಯನ್ನೇ ರೇಪ್ ಮಾಡಿದ ಫೈನಾನ್ಸರ್, ವಿಡಿಯೋ ಲೀಕ್!

Published on

ಗುಜರಾತ್ ನ ರಾಜ್ ಕೋಟ್ ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಸಾಲ ಮರುಪಾವತಿ ಮಾಡದ ಆಟೋ ರಿಕ್ಷಾ ಚಾಲಕನ ಪತ್ನಿಯ ಮೇಲೆ ಫೈನಾನ್ಷಿಯರ್ ಅತ್ಯಾಚಾರವೆಸಗಿದ್ದಾನೆ. ಅದರ ವಿಡಿಯೋ ಕೂಡ ಮಾಡಿ 37 ವರ್ಷದ ಅತ್ಯಾಚಾರ ಸಂತ್ರಸ್ತೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

WhatsApp Group Join Now
Telegram Group Join Now

ದಾಳಿಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಮೂವರ ವಿರುದ್ಧ ದೂರು ದಾಖಲಿಸಲು ಪೊಲೀಸರು ಸಂತ್ರಸ್ತೆ ಬಳಿ ಮನವಿ ಮಾಡಿದ್ದಾರೆ.

ಸಂತ್ರಸ್ತೆ ತನ್ನೊಂದಿಗೆ ನಡೆದ ಘಟನೆಯ ಬಗ್ಗೆ ಹೇಳಿಕೊಂಡಿದ್ದು, ‘ತನ್ನ ಪತಿ ಆಟೋ ರಿಕ್ಷಾ ಓಡಿಸುತ್ತಾನೆ. ಅವರು ಈ ವರ್ಷದ ಫೆಬ್ರವರಿಯಲ್ಲಿ ಅಜಿತ್ ಸಿಂಗ್ ಚಾವ್ಡಾ ಎಂಬ ಖಾಸಗಿ ಫೈನಾನ್ಷಿಯರ್ ಮತ್ತು ಅವರ ವ್ಯಾಪಾರ ಪಾಲುದಾರರಿಂದ 50,000 ರೂ ಸಾಲವನ್ನು ಪಡೆದಿದ್ದರು. ಸಾಲವನ್ನು ಸಕಾಲಕ್ಕೆ ಮರುಪಾವತಿಸಲು ಸಾಧ್ಯವಾಗದಿದ್ದಾಗ ಚಾವಡಾ ಅವರು ದಿನಕ್ಕೆ 1,500 ರೂ.ಗಳನ್ನು ಬಡ್ಡಿಗೆ ನೀಡುವಂತೆ ಕೇಳಿದರು.

ತನ್ನ ಪತಿ ಬಡ್ಡಿಯನ್ನು ಪಾವತಿಸಲು ವಿಫಲವಾದಾಗ, ಚಾವ್ಡಾ ಅವರು ಮನೆಗೆ ನುಗ್ಗಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಮತ್ತು ಅದರ ಸಂಪೂರ್ಣ ವಿಡಿಯೋವನ್ನು ಸಹ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂತ್ರಸ್ತೆಯ ಪ್ರಕಾರ, ಚಾವ್ಡಾ ಅದೇ ತಿಂಗಳಲ್ಲಿ ಅವಳನ್ನು ಬಲವಂತವಾಗಿ ದೇವಸ್ಥಾನಕ್ಕೆ ಕರೆದೊಯ್ದು, ಅವಳ ಹಣೆಯ ಮೇಲೆ ಸಿಂಧೂರವನ್ನು ಲೇಪಿಸಿ ತನ್ನ ಹೆಂಡತಿ ಎಂದು ಘೋಷಿಸಿದ್ದರು. ಇದಾದ ಬಳಿಕ ಆರೋಪಿಗಳು ಸಂತ್ರಸ್ತೆಯ ಮನೆಗೆ ಹಲವು ಬಾರಿ ಬಂದು ಅತ್ಯಾಚಾರ ಎಸಗಿದ್ದಾರೆ ಎಂದೂ ಆರೋಪಿಸಲಾಗಿದೆ.

ಸಂತ್ರಸ್ತೆಯ ಪ್ರಕಾರ, ರಾಜ್‌ಕೋಟ್ ತಾಲೂಕು ಪೊಲೀಸರು ಈ ಪ್ರಕರಣದಲ್ಲಿ ತನ್ನ ದೂರನ್ನು ದಾಖಲಿಸಲು ನಿರಾಕರಿಸಿದರು, ನಂತರ ಅವರು ನ್ಯಾಯಾಲಯವನ್ನು ಸಂಪರ್ಕಿಸಿದರು. ಇದಾದ ಬಳಿಕ ಅತ್ಯಾಚಾರದ ದೂರು ದಾಖಲಿಸಲು ಪೊಲೀಸರಿಗೆ ಸೂಚಿಸಲಾಯಿತು ಎನ್ನಲಾಗಿದೆ.

WhatsApp Group Join Now
Telegram Group Join Now

ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುವುದರ ಜೊತೆಗೆ ಆರೋಪಿ ಫೈನಾನ್ಷಿಯರ್ ಚಾವ್ಡಾಗೆ ಕೂಡ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸಂತ್ರಸ್ತೆಯ ಪ್ರಕಾರ, ಈ ಮಾಹಿತಿ ಪಡೆದ ತಕ್ಷಣ, ಚಾವ್ಡಾ ತನ್ನ ಇಬ್ಬರು ಸಹಚರರೊಂದಿಗೆ ಶುಕ್ರವಾರ ಸಂಜೆ ತನ್ನ ಪತಿ ಬಳಿ ತಲುಪಿದ್ದಾನೆ, ಆತ ಸಿಗುತ್ತಿದ್ದಂತೆಯೇ ಆತನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಈ ದಾಳಿಯಲ್ಲಿ ಚಾವ್ಡಾ ಕೈಗೂ ಗಾಯವಾಗಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!