spot_img
spot_img
spot_img
spot_img
spot_img
spot_img

Big Breaking : ರಾಜ್ಯ ರಾಜಕಾರಣದಲ್ಲಿ ರಮೇಶ ಜಾರಕಿಹೊಳಿಯವರಿಗೆ ದೊಡ್ಡ ಜವಾಬ್ದಾರಿ : ಅರುಣಸಿಂಗ್

Published on

ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪಾತ್ರ ಹಿರಿದಾಗಿದೆ.ಪಕ್ಷ ಅವರಿಗೆ ಶೀಘ್ರದಲ್ಲೇ ದೊಡ್ಡ ಜವಾಬ್ದಾರಿ ನೀಡಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

WhatsApp Group Join Now
Telegram Group Join Now

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಬಿಜೆಪಿ ಕಡೆ ಒಲವು ತೋರಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರಿಗೆ ಪಕ್ಷದಲ್ಲಿ ಮಹತ್ತರ ಜವಾಬ್ದಾರಿ ನೀಡಲಾಗುತ್ತದೆ ಎಂದರು‌.

ಮಾಜಿ ಸಿಎಂ ಯಡಿಯೂರಪ್ಪ ಕರ್ನಾಟಕ ಬಿಜೆಪಿಯ ಅತುಲನೀಯ ಶಕ್ತಿಯಾಗಿದ್ದಾರೆ. ಮುಂಬರುವ ಚುನಾವಣೆ ಹಿನ್ನೆಲೆ ಪಕ್ಷದ ಶಕ್ತಿಸಂವರ್ಧನೆಗೆ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಜನರು ಕೂಡ ಬಿಜೆಪಿಯೆಡೆ ಒಲವು ತೋರುತ್ತಿದ್ದಾರೆ. ಸಹಜವಾಗಿಯೇ ಬಿಜೆಪಿ ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅರುಣ್ ಸಿಂಗ್ ಮುಂದಿನ ಚುನಾವಣೆ ಗೆಲ್ಲುವಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪಾತ್ರ ಹಿರಿದಾಗಿದೆ. ಪಕ್ಷ ಅವರಿಗೆ ಶೀಘ್ರದಲ್ಲೇ ದೊಡ್ಡ ಜವಾಬ್ದಾರಿ ನೀಡಲಿದೆ. ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಅವರ ವರ್ಚಸ್ಸಿದೆ. ಚುನಾವಣೆ ಬಳಿಕ ಬಿಜೆಪಿಯನ್ನ ಗಟ್ಟಿಗೊಳಿಸಲು ಅವರ ಯೋಗದಾನ ಮಹತ್ತರವಾಗಿದೆ. ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಮತಭೇದವಿಲ್ಲ ಎಂದರು.

ಇದಕ್ಕೂ ಮುಂಚೆ ಬೆಳಗಾವಿಗೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಗರದ ಸರ್ಕ್ಯೂಟ್ ಹೌಸ್​ನಲ್ಲಿ ಬಿಜೆಪಿ ಮುಖಂಡರ ಸಭೆ ನಡೆಸಿದರು. ಅರಣ್ ಸಿಂಗ್ ಸಭೆಯಲ್ಲಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಎಂಎಲ್‌ಸಿ ಲಕ್ಷ್ಮಣ ಸವದಿ, ಶಾಸಕರಾದ ಅನಿಲ್ ಬೆನಕೆ, ಮಹೇಶ್ ಕುಮಟ್ಟಳ್ಳಿ ಇದ್ದರು. ಈ ವೇಳೆ ಮಾಜಿ ಸಚಿವ ರಮೇಶ್​ ಜಾರಕಿಹೊಳಿ‌ ಜೊತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗುಪ್ತವಾಗಿ ಸಭೆ ನಡೆಸಿದರು‌.

WhatsApp Group Join Now
Telegram Group Join Now
spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!