spot_img
spot_img
spot_img
spot_img
spot_img
spot_img

ಕರ್ನಾಟಕ ಪೊಲೀಸರ ಮೇಲೆಯೇ ಅಟ್ಯಾಕ್ ಮಾಡುವ ಗ್ಯಾಂಗ್ ಆಯಕ್ಟಿವ್: ಹಾಡುಹಗಲೇ ಸುಲಿಗೆ

Published on

ಪೊಲೀಸರ ಮೇಲೆ ದಾಳಿ ಮಾಡುವ ತಂಡ ಬೆಂಗಳೂರಿನಲ್ಲಿ ಮತ್ತೆ ಸಕ್ರಿಯವಾಗಿದೆ. ಕೆಜಿ ಹಳ್ಳಿಯ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮತ್ತು ಆತನ ತಂಡ ಬೆಂಗಳೂರು ಪೊಲೀಸರಿಗೆ ಸವಾಲಾಗಿದ್ದಾರೆ. ರೌಡಿ ಕಮ್ ಖದೀಮ ಅಬ್ರಹಾರ್ ಇದೀಗ ಮಚ್ಚು ಹಿಡಿದುಕೊಂಡೆ ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಅಡ್ಡಾಡುತ್ತಿದ್ದಾನೆ.

WhatsApp Group Join Now
Telegram Group Join Now

ಶಿವಾಜಿ ನಗರದಲ್ಲಿ ಉದ್ಯಮಿಯೊಬ್ಬರನ್ನು ಹಾಡುಹಗಲೇ ಸುಲಿಗೆ ಮಾಡಿದ್ದ ಅಬ್ರಹಾರ್‌ ಗ್ಯಾಂಗ್​ನ ಆಟಾಟೋಪದ ವೀಡಿಯೋ ಮಾಧ್ಯಮಗಳಿಗೆ ಲಭ್ಯವಾಗಿದೆ. ಅಬ್ರಹಾರ್ ಹಾಗೂ ಮಿರಾಜ್ ಟೀಂ ಈ ಹಿಂದೆ ಆಯಕ್ಟಿವ್ ಆಗಿತ್ತು. ತುಮಕೂರು ಹಾಗೂ ಕೋಲಾರದಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಎಸ್ಕೇಪ್ ಆಗಿತ್ತು.

ಸಲೀಂ ಎಂಬಾತನ ಮರ್ಡರ್ ಕೇಸಲ್ಲಿ ಕೆಜಿ ಹಳ್ಳಿ ಪೊಲೀಸರು ಈ ಕ್ರಿಮಿಗಳನ್ನು ಹುಡುಕಾಟ ನಡೆಸಿದ್ದರು. ಪುಟ್ಟೇನಹಳ್ಳಿ ಬಳಿ ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಈ ಗ್ಯಾಂಗ್​ ದಾಳಿ ಮಾಡಿತ್ತು.

ಇದೀಗ ಮಿರಾಜ್ ಜೈಲಿನಲ್ಲಿದ್ದರೆ, ಅಬ್ರಹಾರ್ ಹೊರಗಡೆ ಆಯಕ್ಟಿವ್ ಆಗಿದ್ದಾನೆ. ಮಚ್ಚಿಡಿದು ಅಡ್ಡಾಡುವ ಮೂಲಕ ಸಿಕ್ಕ ಸಿಕ್ಕವರನ್ನು ದೋಚಿ ಎಸ್ಕೇಪ್ ಆಗ್ತಿದ್ದಾನೆ. ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಬ್ರಾಹರ್​ ಗ್ಯಾಂಗ್​ ಸುಲಿಗೆ ಮಾಡುತ್ತಿದೆ. ಕಮಕ್ ಕಿಮಕ್ ಅಂದರೆ ಈ ಪಾಪಿಗಳು ಉಸಿರನ್ನೇ ನಿಲ್ಲಿಸಿಬಿಡ್ತಾರೆ. ಅಬ್ರಹಾರ್​ ಗ್ಯಾಂಗ್​, ರಾಜಗೋಪಾಲನಗರ, ಬ್ಯಾಡರಹಳ್ಳಿ ಭಾಗದಲ್ಲಿ ಮಚ್ಚಿಡಿದು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದು, ಖಾಕಿ ಪಡೆ ಎಷ್ಟೇ ಹುಡುಕಿದ್ರೂ ಅಬ್ರಹಾರ್​ ಮಾತ್ರ ಬಲೆಗೆ ಬೀಳುತ್ತಿಲ್ಲ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!