spot_img
spot_img
spot_img
spot_img
spot_img
spot_img

ಅಪ್ರಾಪ್ತೆ ಅತ್ಯಾಚಾರ ಕೇಸ್​: ಬಂಧಿತ ಆರೋಪಿಯ ವೈದ್ಯಕೀಯ ಪರೀಕ್ಷಾ ವರದಿ ನೋಡಿ ಪೊಲೀಸರೇ ತಬ್ಬಿಬ್ಬು!

Published on

ಅತ್ಯಾಚಾರ ಪ್ರಕರಣವೊಂದು ಪೊಲೀಸರನ್ನೇ ತಬ್ಬಿಬ್ಬು ಮಾಡಿದ ಪ್ರಸಂಗ ರಾಜಸ್ಥಾನದ ಸಿರೋಹಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now

ವಾಶ್​ ರೂಮ್​ಗೆ ತೆರಳಿದಾಗ ನನ್ನ ಮೇಲೆ ಅತ್ಯಾಚಾರ ನಡೆಯಿತು. ಆರೋಪಿ ನನ್ನನ್ನು ಹೆಸರಿಸಿ ಆಟೋದಲ್ಲಿ ಮನೆಗೆ ಕಳುಹಿಸಿದನು ಎಂದು ನ.28ರಂದು ಅಪ್ರಾಪ್ತೆಯೊಬ್ಬಳು ಸಿರೋಹಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಸಂತ್ರಸ್ತೆಯ ನೆರವಿನಿಂದ ಡಿ.5ರಂದು ಆರೋಪಿಯನ್ನು ಬಂಧಿಸಿದರು.

ಇದಾದ ಬಳಿಕ ಆರೋಪಿಯನ್ನು ವೈದ್ಯಕೀಯ ಚಿಕಿತ್ಸೆ ಒಳಪಡಿಸಿದಾಗ ಆತ ಪುರುಷನಲ್ಲ ಮಹಿಳೆ ಎಂಬ ಶಾಕಿಂಗ್​ ಸಂಗತಿ ಬಯಲಾಗಿದ್ದು, ಪೊಲೀಸರೇ ತಬ್ಬಿಬ್ಬಾಗಿದ್ದಾರೆ. ಪುರುಷನ ವೇಷದಲ್ಲಿದ್ದ ಮಹಿಳೆಯಿಂದಲೇ ಕೃತ್ಯ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢವಾಗಿದೆ.

ಆರಂಭದಲ್ಲಿ ಅತ್ಯಾಚಾರ ಎಂದು ದೂರು ದಾಖಲಾಗಿತ್ತು. ಆದರೆ, ಯಾವಾಗ ಆರೋಪಿ ಪುರುಷನಲ್ಲ, ಮಹಿಳೆ ಅಂತಾ ಗೊತ್ತಾದಾ ಅತ್ಯಾಚಾರ ಪ್ರಕರಣವನ್ನು ಕೈಬಿಟ್ಟು, ಅಪಹರಣ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

WhatsApp Group Join Now
Telegram Group Join Now

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಉದ್ದೇಶ ತಕ್ಷಣಕ್ಕೆ ತಿಳಿದುಬಂದಿಲ್ಲ. ಪೊಲೀಸರ ಪ್ರಕಾರ, ಪತಿಯಿಂದ ದೂರವಾಗಿರುವ ಆರೋಪಿ ಮಹಿಳೆ ತನ್ನ ಜೀವನೋಪಾಯಕ್ಕಾಗಿ ಮಹಿಳೆ ವೇಷ ಧರಿಸಿದ್ದಳು ಎಂದು ತಿಳಿದುಬಂದಿದೆ. ಆರೋಪಿ ಮದುವೆಗಳಲ್ಲಿ ಮೇಜುಗಳನ್ನು ಹಾಕುವುದು, ಅಡುಗೆ ಮಾಡುವುದು ಅಥವಾ ದೀಪಗಳನ್ನು ಹಿಡಿಯುವುದು ಮುಂತಾದ ಸಣ್ಣ ಪುಟ್ಟ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. (ಏಜೆನ್ಸೀಸ್​)

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕುಡಿಯೋ ನೀರಿನ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ

ವಿವೇಕವಾರ್ತೆ: ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾ ಘಟನೆ ಬೀದರ್ (Bidar) ತಾಲೂಕಿನ ಅಣದೂರ್ ಗ್ರಾಮದಲ್ಲಿ...

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...
error: Content is protected !!