spot_img
spot_img
spot_img
spot_img
spot_img
spot_img

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಲು ಪ್ಲಾನ್ ಮಾಡಿದ್ದ ಮಗನ ಬಂಧನ..!

Published on

ವಿವೇಕವಾರ್ತೆ ಕ್ರೈಂ ಡೆಸ್ಕ್- ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ಪಾಪಿ ಮಗನನ್ನು ಬೆಂಗಳೂರಿನ ಆರ್.ಟಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಾನ್ ಡಿ ಕ್ರೂಸ್ ಎಂಬ 65 ವರ್ಷದ ವ್ಯಕ್ತಿ ತನ್ನ 88 ವರ್ಷದ, ವಯಸ್ಸಾದ ತಾಯಿಯನ್ನು ಕೊಲ್ಲಲು ಯತ್ನಿಸಿ ಜೈಲು ಪಾಲಾಗಿದ್ದಾನೆ.

WhatsApp Group Join Now
Telegram Group Join Now

88 ವರ್ಷದ ಕ್ಯಾಥರಿನ್​ಗೆ ನಾಲ್ವರು ಮಕ್ಕಳಿದ್ದು ನಾಲ್ವರ ಪೈಕಿ ಮೊದಲನೆಯವ ಆರೋಪಿ ಜಾನ್, ಇನ್ನಿಬ್ಬರು ಗಂಡು ಮಕ್ಕಳು ಅಮೆರಿಕದಲ್ಲಿದ್ದಾರೆ. ಮತ್ತೋರ್ವ ಪುತ್ರಿ ಆಶ್ರಮದಲ್ಲಿದ್ದಾರೆ.

ಕ್ಯಾಥರಿನ್ ಅವರು ಮೊದಲ ಮಗನ ಹೆಸರಿಗೆ ಆಸ್ತಿ ಬರೆದಿದ್ದರು. ವಯಸ್ಸಾದ ಕಾರಣ ಕ್ಯಾಥರಿನ್ ಅವರಿಗೆ ಅನೇಕ ಆರೋಗ್ಯ ಸಮಸ್ಯೆಗಳಿದ್ದವು. ಉಸಿರಾಟದ ಸಮಸ್ಯೆ ಹಿನ್ನೆಲೆ ಆಕೆಗೆ ನಿರಂತರ ಆಕ್ಸಿಜನ್ ಪೂರೈಕೆ ಅಗತ್ಯ ಇತ್ತು. ಹೀಗಾಗಿ ಅಮೆರಿಕಾದ ಮಗ ತಾಯಿಯನ್ನು ನೋಡಿಕೊಳ್ಳಲು ಬೆಂಗಳೂರಿಗೆ ಕೇರ್ ಟೇಕರ್ ಕಳಿಸಿದ್ದರು. ಆದ್ರೆ ಮತ್ತೊಂದು ಕಡೆ ಜಾನ್ ಗೆ ಆಸ್ತಿ ಬರೆದು ಕೊಟ್ಟಿದ್ದರೂ ಬದುಕಿದ್ದ ತಾಯಿ ಮೇಲೆ ಆತನಿಗೆ ಕೋಪ ಇತ್ತು.

ಇದೇ ವಿಚಾರವಾಗಿ ತಾಯಿ ಜೊತೆ ಆಗಾಗ ಜಗಳ ಮಾಡುತಿದ್ದ. ಸೆ.29ರಂದು ಸಂಜೆ ಮನೆಗೆ ನುಗ್ಗಿದ್ದ ಜಾನ್​ ಗಲಾಟೆ ಮಾಡಿದ್ದಾನೆ. ಕೇರ್ ಟೇಕರ್ ಹೊರಗೆ ತಳ್ಳಿ ತಾಯಿ ಕೊಲೆಗೆ ಯತ್ನಿಸಿದ್ದಾನೆ. ತಾಯಿ ಆಕ್ಸಿಜನ್ ಪೈಪ್ ಕಿತ್ತು ಕೊಲೆ ಮಾಡಲು ಪ್ರಯತ್ನಿಸಿದ್ದಾನೆ. ಈ ವೇಳೆ ಕೇರ್ ಟೇಕರ್ ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿ ವೃದ್ಧೆಯನ್ನ ರಕ್ಷಿಸಿದ್ದ R.T.ನಗರ ಪೊಲೀಸರು ಕೇರ್ ಟೇಕರ್ ದೂರಿನ ಮೇರೆಗೆ ಜಾನ್ ಡಿ ಕ್ರೂಸ್ ಸೆರೆ ಹಿಡಿದಿದ್ದಾರೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಸಿಸಿಬಿ ಪೊಲೀಸರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಜಿಲ್ಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ ಕನ್ನಡ...

ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಬೆಳಗಾವಿ: ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿಎಂ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಬಿಜೆಪಿ...

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ...

ಸಮಯ ಬಂದಾಗ ನಾನು ಸುಮಲತಾ ಜೊತೆ ಮಾತಾಡ್ತೀನಿ: HD ಕುಮಾರಸ್ವಾಮಿ!

ಬೆಂಗಳೂರು: ಸುಮಲತಾ ನನಗೆ ಶತ್ರು ಅಲ್ಲ ಎಂದು ಮಾಜಿ ಸಚಿವ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಜೆ.ಪಿ.ನಗರದಲ್ಲಿ...
error: Content is protected !!