ತಮಿಳುನಾಡು ಮೂಲದ ಆರೋಪಿಗೆ ವಾರೆಂಟ್ ಜಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ಸ್ಟೇಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಆರೋಪಿಗೆ ವಾರೆಂಟ್ ಜಾರಿ ಮಾಡಲು ಹೊನ್ನಾಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹಾಗೂ ಅವರ ಮಾವ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಭರತ್ ಲೋಕಾಯುಕ್ತ ಬಲೆಗೆ ಬಿದ್ದಿರುವ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್. ಹೊನ್ನಾಳಿ ಬಸ್ ನಿಲ್ದಾಣದಲ್ಲಿ ಹೆಡ್ ಕಾನ್ಸ್ಟೇಬಲ್ ಭರತ್ ತಮ್ಮ ಮಾವ ಸುರೇಶ ಮೂಲಕ 15 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ತೋಡಿದ ಖೆಡ್ಡಾಕ್ಕೆ ಬಿದ್ದಿದ್ದಾನೆ.
20 ಸಾವಿರ ಲಂಚಕ್ಕೆ ಬೇಡಿಕೆ: ಗುಡ್ಡದ ಮಾದಾಪುರ ಗ್ರಾಮದ ಅವಿನಾಶ ಎಂಬುವರ ಕಡೆಯಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಚೆಕ್ ಬೌನ್ಸ್ ಕೇಸ್ನಲ್ಲಿ ತಮಿಳುನಾಡು ಮೂಲದ ಆರೋಪಿತರಿಗೆ ವಾರೆಂಟ್ ಜಾರಿ ಮಾಡಲು 20 ಸಾವಿರ ರೂಪಾಯಿ ಲಂಚಕ್ಕೆ ಭರತ್ ಬೇಡಿಕೆ ಇಟ್ಟಿದ್ದರಂತೆ.
20 ಸಾವಿರ ರೂಪಾಯಿಯಲ್ಲಿ 15 ಸಾವಿರ ರೂಪಾಯಿ ಹಣವನ್ನು ತಮ್ಮ ಮಾವ ಸುರೇಶ ಮೂಲಕ ಪಡೆದಿದ್ದರು. ಈ ವೇಳೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ರಾಷ್ಟ್ರಪತಿ ಹಾಗೂ ಆಂಜನೇಯ ದಾಳಿ ನಡೆಸಿ ಹೆಡ್ ಭರತ್ ಹಾಗೂ ಸುರೇಶ್ನನ್ನು ವಶಕ್ಕೆ ಪಡೆದಿದ್ದಾರೆ.
Vivek Kudarimath, Journalist with 8 years of experience.
worked In Pepper Media ( Zee Kannada Project )
Worked In BP9 News ( Now it is Newsfirst)